ಅಸ್ತಿತ್ವಕ್ಕಾಗಿ ಬಿಜೆಪಿ ಸೇರ್ಪಡೆ: ವಿರೋಧ ಪಕ್ಷಗಳ ಮೇಲೆ ಸಿದ್ದರಾಮಯ್ಯರ ಕಿಡಿ | Siddaramaiah Slams Deve Gowda, Kumaraswamy Over BJP Alliance, Questions Their Past Remarks

Karnataka

oi-Shiddalingesh S

ದಾವಣಗೆರೆ ಏ 6: ದಾವಣಗೆರೆಯಲ್ಲಿ ನಡೆದ ರಾಜಕೀಯ ಚಟುವಟಿಕೆಗಳು ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ತೀಕ್ಷ್ಣ ಟೀಕೆ ಮಾಡಿದ್ದಾರೆ. ಎಚ್.ಡಿ. ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರ ಹಿಂದಿನ ಹೇಳಿಕೆಗಳನ್ನು ನೆನಪಿಸಿಕೊಂಡ ಸಿಎಂ, ಇವರು ಈಗ ಭಾರತೀಯ ಜನತಾ ಪಕ್ಷ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಜೊತೆ ಕೈಜೋಡಿಸಿರುವುದನ್ನು ಪ್ರಶ್ನಿಸಿದರು. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ನಡೆಯುತ್ತಿರುವ ಈ ಬದಲಾವಣೆಗಳ ಬಗ್ಗೆ ಅವರು ದಾವಣಗೆರೆಯಲ್ಲಿ ಮಾಧ್ಯಮದವರ ಪ್ರಶ್ನಗಳಿಗೆ ಪ್ರತಿಕ್ರಿಯಿಸಿದರು.

ಈಗ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಸೇರಿರುವ ಇವರೆಲ್ಲಾ ಮೊದಲೆಲ್ಲಾ ಬಿಜೆಪಿ, RSS, ಮೋದಿಯವರ ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದು ನಿಮಗೆ ಗೊತ್ತಿಲ್ಲವಾ ? ಇವರಿಗೆಲ್ಲಾ ನಮ್ಮನ್ನು ಟೀಕಿಸುವ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

Siddaramaiah

ಜನ ಗ್ಯಾರಂಟಿ ಯೋಜನೆಗಳನ್ನು ಮೆಚ್ಚಿಕೊಂಡಿದ್ದಾರೆ.‌ ಬಿಜೆಪಿ ಬಡವರ ಈ ಗ್ಯಾರಂಟಿಗಳನ್ನು ವಿರೋಧಿಸುತ್ತಿದೆ. ಹೀಗೆ ಬಡವರ ವಿರೋಧಿ, ಸಂವಿಧಾನ ವಿರೋಧಿಯಾಗಿರುವ ಬಿಜೆಪಿ ಯನ್ನು ಬೆಂಬಲಿಸಲು ರಾಜ್ಯದ ಜನರಿಗೆ ಕಾರಣವೇ ಇಲ್ಲ ಎಂದರು.

ನಾವು ಕುಟುಂಬ ರಾಜಕಾರಣ ಮಾಡಲ್ಲ. ಜನರೇ ನಮ್ಮನ್ನು ಕರೆ ತಂದು ಚುನಾವಣೆಗೆ ನಿಲ್ಲಿಸಿದ್ದಾರೆ ಎನ್ನುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಹಾಗಾದರೆ ಚನ್ನಪಟ್ಟಣದಲ್ಲಿ ಅವರ ಮಗ ಸೋತಿದ್ದು ಏಕೆ ? ಜನ ಬಯಸಿದಾಗ ಚುನಾವಣೆಗೆ ಸ್ಪರ್ಧಿಸುವುದು ತಪ್ಪಲ್ಲ. ಜನ‌ ತಿರಸ್ಕರಿಸಿದಾಗಲೂ ಆ ರೀತಿ ಮಾತಾಡುತ್ತಾರಲ್ಲಾ ಎಂದು ಮರು ಪ್ರಶ್ನಿಸಿದರು.

ಸಚಿವ ಜಮೀರ್ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರ ಮಾಡಲಿಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿಎಂ, ” ಜಮೀರ್ ಅವರು ಕೇರಳ, ಬಾಗಲಕೋಟೆ ಸೇರಿ ಎಲ್ಲಾ ಕಡೆ ಕೆಲಸ ಮಾಡಿದ್ದಾರೆ. ಹಾಗೆಯೇ ದಾವಣಗೆರೆಯಲ್ಲೂ ಬಂದು ಪ್ರಚಾರ ಮಾಡಿ ಹೋಗಿದ್ದಾರೆ. ಜಮೀರ್ ಅವರು ಪಕ್ಷದ ಸಿಪಾಯಿ. ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರಿಗೆ, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು.

ಚಲುವಾದಿ ನಾರಾಯಣಸ್ವಾಮಿ ಮೊದಲು ಕಾಂಗ್ರೆಸ್ ನಲ್ಲಿದ್ದು ಇಲ್ಲಿ ಲಾಭ ಪಡೆದು ಈಗ ಬಿಜೆಪಿಗೆ ಹೋಗಿ ಅಲ್ಲೂ ಲಾಭ ಮಾಡಿಕೊಂಡಿದ್ದಾರೆ. ಚಲುವಾದಿ ನಾರಾಯಸ್ವಾಮಿ ಅವರು ಬಿಜೆಪಿ ಬಗ್ಗೆ ಏನೇನು ಮಾತಾಡಿದ್ದಾರೆ ಗೊತ್ತಾ ಎಂದು ಪ್ರಶ್ನಿಸಿದರು.

ದೇವೇಗೌಡರು ಮತ್ತು ಕುಮಾರಸ್ವಾಮಿ ಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಈಗ ಬಿಜೆಪಿ ಜೊತೆ ಸೇರಿದ್ದಾರೆ. ಇದುವರೆಗೂ ಅವರು ಬಿಜೆಪಿ, RSS ಬಗ್ಗೆ ಏನೇನು ಮಾತಾಡಿದ್ದಾರೆ ಎನ್ನುವುದನ್ನು ನೆನಪಿಸಿಕೊಳ್ಳಲಿ ಎಂದರು.

ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 59 ಸೀಟು ಗೆದ್ದಿದ್ದ ಜೆಡಿಎಸ್ ಆ ನಂತರ ಅಷ್ಟು ಸೀಟು ಗೆಲ್ಲಲೇ ಇಲ್ಲ. 19 ಕ್ಕೆ ಇಳಿದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾಂಗ್ರೆಸ್ ಸಹಕರಿಸುತ್ತಿಲ್ಲ ಎನ್ನುವ ಕುಮಾರಸ್ವಾಮಿ ಅವರ ಮಾತಿಗೆ ಪ್ರತಿಕ್ರಿಯಿಸಿ, “ಕೊಟ್ಟ ಕುದುರೆಯನ್ನು ಏರದವನು ವೀರನೂ ಅಲ್ಲ, ಶೂರನೂ ಅಲ್ಲ” ಎಂದು ವ್ಯಂಗ್ಯವಾಡಿದರು.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/siddaramaiah-slams-deve-gowda-kumaraswamy-over-bjp-alliance-questions-their-past-remarks-449565.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo