
India
-Malathesha M
ಚುನಾವಣೆ ಪರ್ವ ಮತ್ತೆ ಶುರುವಾಗಿ ದೇಶದಲ್ಲಿ ಒಂದೇ ಬಾರಿಗೆ 4 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶಕ್ಕೆ ಮತದಾನ ಇನ್ನೇನು 2 ತಿಂಗಳಲ್ಲಿ ನಡೆಯಲಿದೆ. ಅದರಲ್ಲೂ ಈ ಬಾರಿಯ ಚುನಾವಣೆ ಬಿಜೆಪಿ ನೇತೃತ್ವದ ಎನ್ಡಿಎ & ವಿರೋಧ ಪಕ್ಷಗಳ ಒಕ್ಕೂಟದ ನಡುವೆ ನೇರ ರಾಜಕೀಯ ಯುದ್ಧವಾಗಿ ತಿರುವನ್ನು ಪಡೆಯುತ್ತಿದೆ. ಈ ಪೈಕಿ ಅಸ್ಸಾಂ ಚುನಾವಣೆ ಅಖಾಡ ರಂಗೇರಿದ್ದು, ಗೆದ್ದೇ ಗೆಲ್ಲಬೇಕು ಎಂದು ರಾಜಕೀಯ ಪಕ್ಷಗಳು ಪಣತೊಟ್ಟಿವೆ. ಈ ಪರಿಸ್ಥಿತಿಯಲ್ಲೇ ಅಸ್ಸಾಂ ಚುನಾವಣೆ ಅಖಾಡಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭರ್ಜರಿ ಎಂಟ್ರಿ ಕೊಟ್ಟಿದ್ದು, ಹೊಸ ಆಟ ಇದೀಗ ಶುರುವಾದಂತೆ ಕಾಣುತ್ತಿದೆ.
ಒಟ್ಟಾರೆ 126 ಸದಸ್ಯ ಬಲ ಹೊಂದಿರುವ ಅಸ್ಸಾಂ ವಿಧಾನಸಭೆ ಚುನಾವಣೆಯನ್ನ ಏಪ್ರಿಲ್ನಲ್ಲಿ ನಡೆಸಲು ಸಕಲ ಸಿದ್ಧತೆ ಸಾಗಿದೆ. ಅಸ್ಸಾಂ ಹಾಲಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು, ಬಿಜೆಪಿ ಪಕ್ಷವನ್ನ ಸತತ 3ನೇ ಬಾರಿ ಅಧಿಕಾರಕ್ಕೆ ತರಲು ಸಜ್ಜಾಗಿದ್ದು, ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಈಗ ಭರ್ಜರಿ ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದಾರೆ. ಅಸ್ಸಾಂನ ಹಾಲಿ ವಾತಾವರಣ ಕೂಡ ನಮ್ಮ ಗೆಲುವಿಗೆ ಪೂರಕ ಎಂದು ಬಿಜೆಪಿ ಲೀಡರ್ಸ್ ಪ್ರತಿಪಾದನೆ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಸ್ಥಳೀಯವಾಗಿ ಖಡಕ್ ನಾಯಕ ಇಲ್ಲ ಎಂಬ ಚರ್ಚೆ ನಡುವೆ ದಕ್ಷಿಣ ಭಾರತದಿಂದ, ಅದರಲ್ಲೂ ನಮ್ಮ ಕರ್ನಾಟಕದ ನೆಲದಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ
ಕಾಂಗ್ರೆಸ್ ಪಕ್ಷ ಬಲಪ್ರದರ್ಶನ ಮಾಡಲು ಇದೇ ಏಪ್ರಿಲ್ ತಿಂಗಳಲ್ಲಿ ಎದುರಾಗುತ್ತಿರುವ ಚುನಾವಣೆಗಳಲ್ಲಿ ಗೆಲ್ಲಲೇಬೇಕು ಎಂಬ ಅನಿವಾರ್ಯತೆಗೆ ಸಿಲುಕಿದೆ. ದಕ್ಷಿಣ ಭಾರತದ ಪ್ರಮುಖ ರಾಜ್ಯಗಳ ಪೈಕಿ ಒಂದಾದ ತಮಿಳುನಾಡು ಹಾಗೂ ಕೇರಳ ಸೇರಿದಂತೆ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಿಗೆ ಇದೇ ಏಪ್ರಿಲ್ ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಅಧಿಕೃತ ಘೋಷಣೆ ಒಂದೇ ಇದೀಗ ಬಾಕಿ ಉಳಿದಿದ್ದು, ಗೆಲುವಿಗಾಗಿ ರಾಜಕೀಯ ಪಕ್ಷಗಳ ರಣತಂತ್ರ ಶುರುವಾಗಿದೆ.
ಕರ್ನಾಟಕ ಡಿಸಿಎಂ ಹೆಗಲಿಗೆ ಜವಾಬ್ದಾರಿ
ಅದರಲ್ಲೂ ಈ ಬಾರಿ ಅಸ್ಸಾಂ ರಾಜ್ಯದಲ್ಲಿ ಗೆಲುವು ಪಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಫೈಟ್ ಬಲು ಜೋರಾಗಿದೆ. ಇದೇ ಕಾರಣಕ್ಕೆ ಅಸ್ಸಾಂ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ಗೆ ಬಲ ತುಂಬಲು, ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ಈ ಮೂಲಕ ಸಂಸದೆ ಪ್ರಿಯಾಂಕಾ ಗಾಂಧಿ ಅವರ ಜೊತೆಗೆ ಅಸ್ಸಾಂ ಚುನಾವಣೆ ಪ್ರಚಾರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾಗಿ ಆಗಲಿದ್ದಾರೆ. ಅಲ್ಲದೆ ಅಸ್ಸಾಂ ಚುನಾವಣೆಯಲ್ಲಿ ಈಗ ಕಾಂಗ್ರೆಸ್ ಗೆಲುವಿಗಾಗಿ ರಣತಂತ್ರ ಕೂಡ ಹೆಣೆಯಲಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಹೊಸ ರಣತಂತ್ರ?
ದೇಶದಲ್ಲಿ ಕಾಂಗ್ರೆಸ್ ಪಕ್ಷ ಕೆಲವೇ ಕೆಲವು ರಾಜ್ಯಗಳಲ್ಲಿ ಇದೀಗ ಅಧಿಕಾರ ಉಳಿಸಿಕೊಂಡಿದ್ದು, ಇನ್ನು ಉಳಿದ ರಾಜ್ಯಗಳನ್ನು ಕೈಯಿಂದ ಕಳೆದುಕೊಂಡಿದೆ. ಆದರೆ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಲು ಹೊಸ ಹುರುಪು ಕಾಂಗ್ರೆಸ್ ನಾಯಕರಿಗೆ ಬೇಕಾಗಿದೆ. ಹೀಗಿದ್ದಾಗ ರಾಹುಲ್ ಗಾಂಧಿ ಅವರ ಕುರಿತಾಗಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಕಾಂಗ್ರೆಸ್ ಹಿರಿಯ ನಾಯಕರು ರಾಹುಲ್ ಗಾಂಧಿ ಅವರ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎಂಬ ಆರೋಪಗಳು ಇವೆ. ಅಲ್ಲದೆ ಚುನಾವಣೆಗೆ ಇನ್ನೇನು ಕೆಲ ದಿನ ಬಾಕಿ ಇರುವಾಗಲೇ ರಾಹುಲ್ ಗಾಂಧಿ ಅವರ ನಾಯಕತ್ವದ ಬಗ್ಗೆ ಚರ್ಚೆ ಜೋರಾಗಿದೆ.
ರಾಹುಲ್ ಗಾಂಧಿ ಬದಲಾಗಿ ಇದೀಗ, ಸಂಸದೆ ಹಾಗೂ ರಾಹುಲ್ ಗಾಂಧಿ ಅವರ ಸಹೋದರಿ ಆಗಿರುವ ಪ್ರಿಯಾಂಕಾ ಗಾಂಧಿ ಅವರಿಗೆ ಅಧಿಕಾರವನ್ನ ಕೊಡಲು ವರಿಷ್ಠರು ಹೆಜ್ಜೆ ಇಟ್ಟಂತೆ ಕಾಣುತ್ತಿದೆ. ಇದರ ಭಾಗವಾಗಿ ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಅವರನ್ನ ಪಕ್ಷದ ಅಭ್ಯರ್ಥಿಗಳ ಪರಿಶೀಲನಾ ಸಮಿತಿಗೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಹಾಗೂ ಕರ್ನಾಟಕದ ಉಪಮುಖ್ಯಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನ ಹಿರಿಯ ಕೇಂದ್ರ ವೀಕ್ಷಕರಲ್ಲಿ ಒಬ್ಬರಾಗಿ ನೇಮಕ ಮಾಡಲಾಗಿದೆ. ಇವರ ಜೊತೆಗೆ ಛತ್ತೀಸ್ಗಢ ರಾಜ್ಯದ ಮಾಜಿ ಸಿಎಂ ಭೂಪೇಶ್ ಬಘೇಲ್ ಅವರಿಗೂ ವೀಕ್ಷಕರ ಸ್ಥಾನ ನೀಡಲಾಗಿದೆ. ಆ ಮೂಲಕ ಕಾಂಗ್ರೆಸ್ ವರಿಷ್ಠರು ಹೊಸ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ.
-

Bengaluru Waste: ಕಸ ವಿಲೇವಾರಿಗೆ ಬಿಜೆಪಿ ನಾಯಕರಿಂದಲೇ ಅಡಚಣೆ, ‘ಎಸ್ಮಾ’ ಜಾರಿ ಎಚ್ಚರಿಕೆ ಕೊಟ್ಟ ಡಿಕೆ.ಶಿವಕುಮಾರ್
-

Election: ಮತದಾರರ ಪಟ್ಟಿಯಲ್ಲಿ ಉದ್ದೇಶಪೂರ್ವಕ ತಪ್ಪು: ಮ್ಯಾಪಿಂಗ್ ಮಾಡಿ ಸರಿಪಡಿಸಲು ಡಿಕೆ ಶಿವಕುಮಾರ್ ಮನವಿ
-

Gold Price: ಬಂಗಾರದ ಬೆಲೆ 80,000 ರೂ.ಗಿಂತಲೂ ಕಡಿಮೆ ಆಗಲಿದೆ: ತಜ್ಞರ ಮುನ್ಸೂಚನೆ, ಕಾರಣವೇನು?
-

CBSE 10ನೇ ತರಗತಿ ಗಣಿತ ಪರೀಕ್ಷೆಗೆ ವಿದ್ಯಾರ್ಥಿಗಳ ಮಿಶ್ರ ಪ್ರತಿಕ್ರಿಯೆ: ‘ಕೇಸ್ ಸ್ಟಡಿ’ ವಿಭಾಗಕ್ಕೆ ಹೆಚ್ಚಿನ ಗಮನ ಅಗತ್ಯ
-

Gold, Silver Rate Feb 18: ಚಿನ್ನ ಪ್ರಿಯರಿಗೆ 4ನೇ ದಿನವೂ ಸಂತೋಷ: ಬೆಳ್ಳಿ ಬೆಲೆ ಬರೋಬ್ಬರಿ 5,000 ರೂ. ಇಳಿಕೆ
-

ನಮ್ಮ ಮೆಟ್ರೋ: ಹಸಿರು ಮಾರ್ಗದ ಜಯನಗರ–ಆರ್.ವಿ.ರಸ್ತೆ ನಡುವೆ ನಿಧಾನಗತಿಯಲ್ಲಿ ರೈಲು ಸಂಚಾರ
-

ರೈಲು ಪ್ರಯಾಣಿಕರಿಗೆ ಭರ್ಜರಿ ಸುದ್ದಿ ಕೊಟ್ಟ ರೈಲ್ವೆ ಇಲಾಖೆ, ಈ ಮಾರ್ಗದಲ್ಲಿ ವಿಶೇಷ ರೈಲು… South Western Railway
-

Gold: ಚಿನ್ನ – ಬೆಳ್ಳಿಗೆ ಪಿಂಕ್ ಕಾಗದ ದಶಕಗಳಿಂದ ಆಸರೆ: ಏನಿದರ ವಿಶೇಷತೆ, ಹಿನ್ನೆಲೆ ವಿವರ ಇಲ್ಲಿದೆ
-

IT – BT: ಕರಾವಳಿ ಅಭಿವೃದ್ಧಿ: ಸಚಿವ ಪ್ರಿಯಾಂಕ್ ಖರ್ಗೆ vs ಉದ್ಯಮಿ ಮೋಹನ್ದಾಸ್ ಪೈ ನಡುವೆ ಟ್ವೀಟ್ ಸಮರ
-

KSRTC: ನಾಳೆ ಬಸ್ ಸಂಚಾರ ವ್ಯತ್ಯಾಸ: 38 ತಿಂಗಳ ವೇತನ ಬಾಕಿ: ಫೆ.19–20ಕ್ಕೆ ಕೆಎಸ್ಆರ್ಟಿಸಿ ಸೇರಿ ಸಾರಿಗೆ ನೌಕರರ ಮುಷ್ಕರ
-

Horoscope February 18: ಆರೋಗ್ಯದ ಮೇಲೆ ಎಚ್ಚರವಹಿಸಿ, ಯಾವ ರಾಶಿಯವರಿಗೆ ಶುಭ-ಅಶುಭ?, ದಿನ ಭವಿಷ್ಯ
-

Ambur Biryani: ಬೆಂಗಳೂರಿನ ಸ್ಟಾರ್ ಅಂಬೂರ್ ಬಿರಿಯಾನಿ ಹೋಟೆಲ್ಗೆ ಶಾಕ್ ಕೊಟ್ಟ ಜಿಬಿಎ
-

Rashmi Leela biography: ಸೀರಿಯಲ್ ಲೋಕದಿಂದ ಇಹಲೋಕದವರೆಗೆ: ನಟಿ ರಶ್ಮಿ ಲೀಲಾ ಹೋರಾಟ ಮತ್ತು ಅಕಾಲಿಕ ವಿದಾಯ
-

ಔಷಧ ಖರೀದಿಗೆ 30 ಕೋಟಿ ರೂ.ಅನುದಾನ: ಆಸ್ಪತ್ರೆಗಳಲ್ಲಿ ಪರದಾಡುತ್ತಿದ್ದ ರೋಗಿಗಳಿಗೆ ನೆಮ್ಮದಿ
-

Explainer: ಉತ್ತರ ಭಾರತದ ಮಹಿಳೆ ಅಡುಗೆಮನೆಗೆ ಸೀಮಿತ, ದಕ್ಷಿಣ ಭಾರತದ ಮಹಿಳೆ ಮಾಡರ್ನ್: ಈ ವಿಭಜನೆ ಸರಿಯೇ?
Disclaimer: This content was automatically imported from a third-party source via RSS feed. The original source is: https://kannada.oneindia.com/news/india/karnataka-dcm-dk-shivakumar-entry-to-the-assam-campaign-to-counter-the-himanta-biswa-sarma-and-bjp-011-444407.html. xn--babytilbehr-pgb.com does not claim ownership of this content. All rights remain with the original publisher.
