
Karnataka
oi-Shankrappa Parangi
ಬೆಂಗಳೂರು: ನಗರದ ಯಲಹಂಕ ಕೋಗಿಲು ಬಡಾವಣೆ ಅಕ್ರಮ ವಲಸಿಗರ ವಿಚಾರದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದರು. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ತೆಗೆದುಕೊಂಡ ನಿರ್ಧಾರ ವ್ಯಾಪಕ ಚರ್ಚೆಗೆ, ವಿಪಕ್ಷ ನಾಯಕರ ಟೀಕೆಗೆ ಗುರಿಯಾಗಿತ್ತು. ಇದೀಗ ಕೇರಳ ಚುನಾವಣೆ ಹೊತ್ತಿನಲ್ಲಿ ಆ ರಾಜ್ಯದ ಲೋಕಸಭಾ ಕ್ಷೇತ್ರವೊಮದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬರೋಬ್ಬರಿ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿದ್ದು ಖಂಡನೀಯ ಎಂದು ವಿಪಕ್ಷ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಮೊದಲು ಕರ್ನಾಟಕದ ಸಮಸ್ಯೆಗೆ ಕಿವಿ ಕೊಡಿ ಎಂದು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳಂ ರಾಜ್ಯದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ಹೆಚ್ಚುವರಿ ವಿಶೇಷ ಅನುದಾನ ನೀಡಿರುವ ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವರಿಗೆ ಅಭಿನಂದನೆಗಳು’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ನೀವು ಕರ್ನಾಟಕದ ಸಿಎಂ ಅಲ್ಲ, ಕೇರಳದ ಮುಖ್ಯಮಂತ್ರಿ ಎಂದು ಎಕ್ಸ್ ಪೊಸ್ಟ್ ಮಾಡಿ ಅವರು ಲೇವಡಿ ಮಾಡಿದ್ದಾರೆ.

ರಾಜ್ಯದ ಕನ್ನಡಿಗರು ನತದೃಷ್ಟರು
ಕೇರಳಂ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ಆದರೆ ನತದೃಷ್ಟ ಕನ್ನಡಿಗರು ಕೇರಳಂನವರಷ್ಟು ಅದೃಷ್ಟವಂತರಲ್ಲ ಬಿಡಿ! ಎಂದು ಸಿಎಂ ಸಿದ್ದರಾಮಯ್ಯರ ಅನುದಾನ ನಿರ್ಧಾರವನ್ನು ಖಂಡಿಸಿದ್ದಾರೆ.
2025-26ನೇ ಕಳೆದ ಹಣಕಾಸು ವರ್ಷದಲ್ಲಿ ಬಜೆಟ್ ಹೊರತಾಗಿ ವೆಚ್ಚ ಮಾಡಿರುವ ಮತ್ತು ಮಾಡಲಾಗುವ 14,767 ಕೋಟಿ ರೂಪಾಯಿ ಮೊತ್ತದ 3ನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜಿನಲ್ಲಿ ವಯನಾಡಿನ ಮುಪ್ಪಾಡಿಯಲ್ಲಿ ಉಂಟಾದ ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ 10 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಿದೆ ಎಂದು ಅವರು ವಿವರಿಸಿದರು.
ಕರ್ನಾಕಟದ ಸಮಸ್ಯೆಗಳತ್ತ ಗಮನ ಕೊಡಿ
ಒಂದು ಕಡೆ ನಮ್ಮದೇ ರಾಜ್ಯದಲ್ಲಿ ಕಸ ವಿಲೇವಾರಿ ಮಾಡುವ ಸಂಸ್ಥೆಗಳಿಗೆ, ಸರ್ಕಾರಿ ನೌಕರರ ಸಂಬಳಕ್ಕೆ, ಗುತ್ತಿದೆಗಾರರ ಬಾಕಿ ಪಾವತಿ ಮಾಡಲು ಹಣವಿಲ್ಲ. ಸರ್ಕಾರಿ ಶಾಲೆಗಳ ದುರಸ್ತಿಗೆ, ಸರಿಯಾದ ಸಮಯಕ್ಕೆ ಮಕ್ಕಳ ಪಠ್ಯಪುಸ್ತಕ, ಯುನಿಫಾರ್ಮ್, ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ನೀಡಲು ದುಡ್ಡಿಲ್ಲ. ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ, ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳ ಬಿಲ್ ಪಾವತಿಗೆ ಹಣವಿಲ್ಲ. ಶಾಸಕರಿಗೆ ಕ್ಷೇತ್ರದ ಯೋಜನೆ ಮತ್ತು ಅಭಿವೃದ್ಧಿಗೆ ಅನುದಾನವಿಲ್ಲ.

ರಾಜ್ಯದ ಹಣಕಾಸು ಪರಿಸ್ಥಿತಿಯೇ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ, ನೆರೆ ರಾಜ್ಯಕ್ಕೆ 10 ಕೋಟಿ ಹೆಚ್ಚುವರಿ ನೆರವು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಲಜ್ಜತೆ, ಭಂಡತನಕ್ಕೆ ಅವರೇ ಸಾಟಿ ಎಂದು ಅವರು ವಾಗ್ದಾಳಿ ನಡೆಸಿದರು.
ಕೇರಳ ರಾಜಕೀಯಕ್ಕೆ ತುಪ್ಪ ಸುರಿದ ಸಿದ್ದರಾಮಯ್ಯ
ಕನ್ನಡಿಗರ ರಕ್ತ ಹೀರಿ ಬೇರೆ ರಾಜ್ಯದ ರಾಜಕೀಯಕ್ಕೆ ತುಪ್ಪ ಸುರಿಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾನ-ಮರ್ಯಾದೆ ಇದೆಯೇ ಎಂಬುದು ಸಮಸ್ತ ಕನ್ನಡಿಗರ ಪ್ರಶ್ನೆಯಾಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ, ರಸ್ತೆಗಳಲ್ಲಿ ಗುಂಡಿ ಬಿದ್ದಿವೆ, ರೈತರು ಸಾಲಬಾಧೆಯಿಂದ ಸಾಯುತ್ತಿದ್ದಾರೆ. ಆದರೂ ಕೇರಳಂ ಚುನಾವಣಾ ಗಿಮಿಕ್ಗಾಗಿ, ಕನ್ನಡಿಗರ ಕೋಟಿ ಕೋಟಿ ಹಣ ಸುರಿಯಲು ನಿಮಗೆ ಯಾವ ನೈತಿಕತೆ ಇದೆ? ಇದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಲ್ಲದೆ ಮತ್ತೇನು? ಎಂದು ಅವರು ಆಕ್ರೋಶ ಹೊರ ಹಾಕಿದ್ದಾರೆ.
ನನ್ನ ತೆರಿಗೆ ನನ್ನ ಹಕ್ಕು ಎಂದಿದ್ದ ಸಿದ್ದರಾಮಯ್ಯ!
ಕರ್ನಾಟಕ ಸರ್ಕಾರವು ಪೂರಕ ಅಂದಾಜುಗಳನ್ನು ಮಂಡಿಸಿದೆ, ಇದರಲ್ಲಿ ಕೇರಳ ಚುನಾವಣೆ ಹೊತ್ತಿನಲ್ಲಿ ಪ್ರಿಯಾಂಕಾ ಗಾಂಧಿ ಅವರ ವಯನಾಡಿಗೆ 10 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಸಿಎಂ ಸಿದ್ದರಾಮಯ್ಯ ಅವರು ಒದಗಿಸಿದ್ದಾರೆ. “ನನ್ನ ತೆರಿಗೆ, ನನ್ನ ಹಕ್ಕು” ಎಂದು ಗುಡುಗಿದ್ದ ಇದೇ ಸಿದ್ದರಾಮಯ್ಯ ಅವರು ಈಗ ತನ್ನ ಸ್ವಂತ ಕುರ್ಚಿಯನ್ನು ಉಳಿಸಿಕೊಳ್ಳಲು ಬೇರೆ ರಾಜ್ಯದ ಮತದಾರರಿಗೆ ಚೆಕ್ ಬರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಬಿ.ವೈ.ವಿಜಯೇಂದ್ರ ಗುಡುಗಿದ್ದಾರೆ.
-

“ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು”
-

ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
-

ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ
-

Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ
-

‘ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ’: ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್
-

Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ
-

Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್
-

ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು
-

NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ ‘ಆಡಿಟ್’ ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ
-

Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?
-

ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ
-

Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು
-

March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?
-

ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ
-

ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/r-ashoka-slams-siddaramaiah-over-rs10-crore-special-grant-to-wayanad-kerala-amid-karnatakas-issues-448149.html. xn--babytilbehr-pgb.com does not claim ownership of this content. All rights remain with the original publisher.
