
Entertainment
oi-Manohara M
ಕನ್ನಡ ಚಿತ್ರರಂಗದ ದಶಕಗಳ ಬೇಡಿಕೆಗಳಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಸರ್ಕಾರವು, 2026-27ನೇ ಸಾಲಿನ ಬಜೆಟ್ನಲ್ಲಿ ಸಿನಿಮೋದ್ಯಮಕ್ಕೆ ಹೊಸ ಚೈತನ್ಯ ನೀಡುವ ಯೋಜನೆಗಳನ್ನು ಪ್ರಕಟಿಸಿದೆ. ಚಿತ್ರೀಕರಣಕ್ಕೆ ಏಕಗವಾಕ್ಷಿ ಅನುಮತಿಯಿಂದ ಹಿಡಿದು ಬಾಕಿ ಇರುವ ಸಹಾಯಧನ ಬಿಡುಗಡೆಯವರೆಗೆ ಹಲವು ಪ್ರಮುಖ ನಿರ್ಧಾರಗಳನ್ನು ಬಜೆಟ್ನಲ್ಲಿ ತೆಗೆದುಕೊಳ್ಳಲಾಗಿದೆ.
‘ಸಿನಿ ಮಿತ್ರ’ ಏಕಗವಾಕ್ಷಿ ಡಿಜಿಟಲ್ ವ್ಯವಸ್ಥೆ
ರಾಜ್ಯದಲ್ಲಿ ಸಿನಿಮಾ ಹಾಗೂ ಇತರೆ ಚಿತ್ರೀಕರಣಗಳಿಗೆ ವಿವಿಧ ಇಲಾಖೆಗಳ ಅನುಮತಿಗಳನ್ನು ಪಡೆಯಲು ನಿರ್ಮಾಪಕರು ಮತ್ತು ಚಿತ್ರತಂಡಗಳು ಹಲವು ಕಚೇರಿಗಳಿಗೆ ತೆರಳಬೇಕಾಗುವ ಸಮಸ್ಯೆ ಎದುರಿಸುತ್ತಿದ್ದರು. ಈ ಸಮಸ್ಯೆಗೆ ಪರಿಹಾರವಾಗಿ ‘ಸಿನಿ ಮಿತ್ರ’ (Cine Mitra) ಎಂಬ ಆನ್ಲೈನ್ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಹೇಳಿದರು.

ಈ ವ್ಯವಸ್ಥೆಯ ಮೂಲಕ ಪೊಲೀಸ್, ಪ್ರವಾಸೋದ್ಯಮ, ಅರಣ್ಯ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಅನುಮತಿಗಳನ್ನು ಒಂದೇ ಡಿಜಿಟಲ್ ವೇದಿಕೆಯಲ್ಲಿ ಪಡೆಯುವ ಅವಕಾಶ ಸಿಗಲಿದೆ. ಇದರಿಂದ ಚಿತ್ರೀಕರಣ ಪ್ರಕ್ರಿಯೆ ಸುಗಮವಾಗುವ ಜೊತೆಗೆ ಸಮಯ ಮತ್ತು ವೆಚ್ಚವೂ ಕಡಿಮೆಯಾಗಲಿದೆ.
‘ಕರ್ನಾಟಕ ಫಿಲ್ಮ್ ಲೊಕೇಷನ್ ಡಿಜಿಟಲ್ ಮ್ಯಾಪ್’
ರಾಜ್ಯದಲ್ಲಿ ಚಿತ್ರೀಕರಣಕ್ಕೆ ಸೂಕ್ತವಾಗಿರುವ ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು ಹಾಗೂ ನೈಸರ್ಗಿಕ ಸ್ಥಳಗಳ ಮಾಹಿತಿಯನ್ನು ಒಟ್ಟುಗೂಡಿಸುವ ಉದ್ದೇಶದಿಂದ ‘ಕರ್ನಾಟಕ ಫಿಲ್ಮ್ ಲೊಕೇಷನ್ ಡಿಜಿಟಲ್ ಮ್ಯಾಪ್’ ಅಭಿವೃದ್ಧಿಪಡಿಸಲಾಗುತ್ತದೆ. ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಡಿಜಿಟಲ್ ಮ್ಯಾಪ್ ರೂಪುಗೊಳ್ಳಲಿದ್ದು, ಚಿತ್ರ ನಿರ್ಮಾಪಕರು ಮತ್ತು ನಿರ್ದೇಶಕರು ರಾಜ್ಯದ ವಿವಿಧ ಚಿತ್ರೀಕರಣ ಸ್ಥಳಗಳ ವಿವರಗಳನ್ನು ಸುಲಭವಾಗಿ ತಿಳಿದುಕೊಳ್ಳಲು ನೆರವಾಗಲಿದೆ. ಇದರಿಂದ ಕರ್ನಾಟಕದಲ್ಲಿ ಚಿತ್ರೀಕರಣ ಹೆಚ್ಚಾಗುವ ಸಾಧ್ಯತೆಯಿದೆ.
ಸಿನಿಮಾಗಳಿಗೆ ಸಹಾಯಧನ
ಗುಣಾತ್ಮಕ ಕನ್ನಡ ಚಲನಚಿತ್ರಗಳಿಗೆ ನೀಡಲಾಗುತ್ತಿದ್ದ ಸಹಾಯಧನ ಕೆಲವು ವರ್ಷಗಳಿಂದ ಸ್ಥಗಿತಗೊಂಡಿತ್ತು. ಈಗ ಸರ್ಕಾರ ಮತ್ತೆ ಸಹಾಯಧನ ವ್ಯವಸ್ಥೆಯನ್ನು ಪುನರಾರಂಭಿಸಿದೆ. 2025-26ನೇ ಸಾಲಿನಲ್ಲಿ ಕಳೆದ ಮೂರು ವರ್ಷಗಳ ಸಿನಿಮಾಗಳನ್ನು ಗುರುತಿಸಿ ಸಹಾಯಧನ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಉಳಿದಿರುವ ಮೂರು ವರ್ಷಗಳ ಚಲನಚಿತ್ರಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಸಹಾಯಧನ ನೀಡಲು 20 ಕೋಟಿ ರೂಪಾಯಿ ಅನುದಾನ ಒದಗಿಸಲಾಗುತ್ತದೆ ಎಂದು ಘೋಷಿಸಲಾಗಿದೆ.
‘ಡಿಜಿಟಲ್ ದೃಶ್ಯ ಕರ್ನಾಟಕ’ ವೇದಿಕೆ
ಚಿತ್ರಕಲಾ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಲಭ್ಯವಿರುವ ಹಳೆಯ ಛಾಯಾಚಿತ್ರಗಳು ಮತ್ತು ವೀಡಿಯೊ ಡಾಕ್ಯುಮೆಂಟರಿಗಳನ್ನು ಡಿಜಿಟಲ್ ಮಾದರಿಗೆ ಪರಿವರ್ತಿಸಲು ಸರ್ಕಾರ ಯೋಜನೆ ರೂಪಿಸಿದೆ. ಈ ಮಾಹಿತಿಯನ್ನು ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವಂತೆ ‘ಡಿಜಿಟಲ್ ದೃಶ್ಯ ಕರ್ನಾಟಕ’ ಎಂಬ ಹೊಸ ಡಿಜಿಟಲ್ ವೇದಿಕೆ ನಿರ್ಮಿಸಲಾಗುತ್ತದೆ. ಇದಕ್ಕಾಗಿ 5 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಮೈಸೂರು ಫಿಲ್ಮ್ ಸಿಟಿ ಯೋಜನೆ
ಚಿತ್ರೋದ್ಯಮಕ್ಕೆ ದೊಡ್ಡ ಉತ್ತೇಜನ ನೀಡುವ ಉದ್ದೇಶದಿಂದ ಮೈಸೂರಿನಲ್ಲಿ ಫಿಲ್ಮ್ ಸಿಟಿ ಸ್ಥಾಪನೆಗೆ ಈ ಮೊದಲು 500 ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ. ಈ ಫಿಲ್ಮ್ ಸಿಟಿಯನ್ನು ಪಿಪಿಪಿ (ಪಬ್ಲಿಕ್-ಪ್ರೈವೇಟ್ ಪಾರ್ಟ್ನರ್ಶಿಪ್) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಚಿತ್ರೀಕರಣ ಸೌಲಭ್ಯಗಳ ಜೊತೆಗೆ ಪ್ರವಾಸಿಗರಿಗೂ ಆಕರ್ಷಕವಾಗುವಂತೆ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ಹಾಗೂ ರೆಸ್ಟೋರೆಂಟ್ಗಳನ್ನು ನಿರ್ಮಿಸಲಾಗುತ್ತದೆ. ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ವ್ಯವಹಾರ ಪಾಲುದಾರರನ್ನು ನೇಮಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಮ್ಯೂಸಿಯಂ ಆಗಿ ಪುಟ್ಟಣ್ಣ ಕಣಗಾಲ್ ಮನೆ
ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಸ್ಮರಣಾರ್ಥ ಅವರ ನಿವಾಸವನ್ನು ವಸ್ತು ಸಂಗ್ರಹಾಲಯ (ಮ್ಯೂಸಿಯಂ) ಆಗಿ ರೂಪಿಸಲಾಗುತ್ತದೆ. ಇದು ಕನ್ನಡ ಸಿನಿಮಾದ ಇತಿಹಾಸವನ್ನು ಪರಿಚಯಿಸುವ ಪ್ರಮುಖ ಕೇಂದ್ರವಾಗಲಿದೆ. ಇದರೊಂದಿಗೆ ಯುವಜನರಿಗೆ ಮಹಾತ್ಮ ಗಾಂಧಿ ಅವರ ವಿಚಾರಧಾರೆಗಳನ್ನು ಪರಿಚಯಿಸಲು ‘ಮಹಾತ್ಮಾ ಗಾಂಧಿ ಜನ ಶಿಕ್ಷಣ ಕೇಂದ್ರ’ ಎಂಬ ಯೋಜನೆ ಜಾರಿಗೊಳಿಸಲಾಗುತ್ತದೆ. ಇದರೊಂದಿಗೆ ಜಿಲ್ಲೆಯ ಗಾಂಧಿ ಭವನಗಳನ್ನು ಪುನರುಜ್ಜೀವನಗೊಳಿಸುವುದು, ಹಾಗೆಯೇ ಗಾಂಧೀಜಿ ಭೇಟಿ ನೀಡಿದ ರಾಜ್ಯದ ವಿವಿಧ ಸ್ಥಳಗಳಲ್ಲಿ ಅವರ ಸ್ಮರಣಾರ್ಥ ಗಾಂಧಿ ಸ್ಮಾರಕ ಸ್ತಂಭಗಳನ್ನು ನಿರ್ಮಿಸುವ ಯೋಜನೆ ಕೂಡ ಸರ್ಕಾರ ಘೋಷಿಸಿದೆ. ಈ ಮೂಲಕ 2026ರ ರಾಜ್ಯ ಬಜೆಟ್ನಲ್ಲಿ ಸಿನಿಮಾ ಕ್ಷೇತ್ರದ ಅಭಿವೃದ್ಧಿ, ಸಂಸ್ಕೃತಿ ಸಂರಕ್ಷಣೆ ಹಾಗೂ ಯುವಜನರಿಗೆ ರಾಷ್ಟ್ರನಾಯಕರ ವಿಚಾರಧಾರೆ ಪರಿಚಯಿಸುವ ಹಲವು ಮಹತ್ವದ ಯೋಜನೆಗಳನ್ನು ಸರ್ಕಾರ ಘೋಷಣೆ ಮಾಡಿದೆ.
-

”ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ”
-

ಕರ್ನಾಟಕ ಬಜೆಟ್ 2026: ನಮಗೆ ಹಣ ಬೇಡ, ಗುಣಮಟ್ಟದ ಶಾಲೆ, ಆಸ್ಪತ್ರೆ ಕೊಡಿ: ಸಾರ್ವಜನಿಕರ ಆಗ್ರಹ
-

Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ
-

Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ
-

45,000 ಕೋಟಿ ರೂಪಾಯಿ ಸಂಗ್ರಹ ಗುರಿ, ಮದ್ಯಪ್ರಿಯರಿಗೆ ದಿಢೀರ್ ಎದುರಾಯ್ತು ಆಘಾತ… Karnataka Budget 2026
-

ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ
-

ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್
-

Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ?
-

ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ – ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು
-

Gruha Lakshmi Yojana: ಗೃಹಲಕ್ಷ್ಮಿ ಸೇರಿ ಗ್ಯಾರಂಟಿ ಯೋಜನೆಗಳಿಗೆ ಭರ್ಜರಿ ಅನುದಾನ, ಮಹಿಳೆಯರಿಗೆ ಗುಡ್ನ್ಯೂಸ್
-

Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ
-

Karnataka Budget 2026: ಕರ್ನಾಟಕ ಬಜೆಟ್ 2026ಕ್ಕೆ ಕ್ಷಣಗಣನೆ: ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ
-

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ
-

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಬಜೆಟ್ನಲ್ಲಿ ಘೋಷಣೆ
-

ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ
Disclaimer: This content was automatically imported from a third-party source via RSS feed. The original source is: https://kannada.oneindia.com/entertainment/cine-mitra-portal-mysuru-film-city-puttanna-kanagal-memorial-what-karnataka-budget-offers-sandalwood-446149.html. xn--babytilbehr-pgb.com does not claim ownership of this content. All rights remain with the original publisher.
