
India
oi-Hitesh Y
Hosur Airport: ಕರ್ನಾಟಕದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕೆಲವೊಂದು ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಚರ್ಚೆಯ ಮುನ್ನೆಲೆಗೆ ಬಂದಿದೆ.
ಇದೇ ಸಂದರ್ಭದಲ್ಲಿ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಕೃಷಿ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ. ಆದರೆ, ಇದಕ್ಕೆ ಅಲ್ಲಿನ ಕನ್ನಡ, ತೆಲುಗು ಹಾಗೂ ತಮಿಳು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸೂರು ವಿಮಾನ ನಿಲ್ದಾಣ ನಿರ್ಮಾಣ ಭೂಸ್ವಾಧೀನ ವಿವಾದಕ್ಕೆ ಸಂಬಂಧಿಸಿದಂತೆ ಹೊಸೂರಿನಲ್ಲಿರುವ ಕನ್ನಡಿಗರೊಂದಿಗೆ ತಮಿಳುನಾಡಿನ ಶಾಸಕ ಕನ್ನಡಲ್ಲೇ ಮಾತನಾಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರಿಗೆ ಪೈಪೋಟಿ ನೀಡುವ ಉದ್ದೇಶದಿಂದ ಬೆಂಗಳೂರಿನ ಗಡಿಭಾಗದ ಹಾಗೂ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ತಮಿಳುನಾಡು ಸರ್ಕಾರವು ಮುಂದಾಗಿತ್ತು. ಆದರೆ, ಇದಕ್ಕೆ ಹಲವು ಅಡೆತಡೆಗಳು ಎದುರಾಗಿವೆ. ಮುಖ್ಯವಾಗಿ ಈ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ತೊಡಕಾಗಿದೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2,979 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಉದ್ದೇಶಿಸಲಾಗಿದೆ. ಈ ಭಾಗದಲ್ಲಿನ 12 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸೂರು ಮತ್ತು ಶೂಲಗಿರಿ ತಾಲ್ಲೂಕುಗಳ ಒಟ್ಟು 12 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ.
ಕನ್ನಡದಲ್ಲಿ ಮಾತನಾಡಿದ ತಮಿಳು ಶಾಸಕ
ಇನ್ನು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ತೊಡಕಾಗಿದ್ದು, ಈ ಭಾಗದ ಕನ್ನಡ ರೈತರೊಂದಿಗೆ ಕನ್ನಡದಲ್ಲೇ ತಮಿಳುನಾಡಿನ ಶಾಸಕ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಲು ಬಿಡುವುದಿಲ್ಲ. ಒಂದೊಮ್ಮೆ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ನಾನು ರಾಜಕೀಯಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಮಿಳುನಾಡಿನ ಶಾಸಕ ಕನ್ನಡದಲ್ಲೇ ಹೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಮಿಳುನಾಡಿನ ಹೊಸೂರಿನ ಶಾಸಕ ವೈ. ಪ್ರಕಾಶ್ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ವಿಶೇಷವೆಂದರೆ ಇವರು ಆಡಳಿತರೂಢ ಡಿಎಂಕೆ ಪಕ್ಷದಿಂದ ಶಾಸಕರಾಗಿದ್ದಾರೆ.
ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ವಿಚಾರವನ್ನು ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷವು ಪ್ರತಿಷ್ಠೆಯಾಗಿ ಪರಿಗಣಿಸಿದೆ. ಆದರೆ ಹೊಸೂರಿನ ಶಾಸಕರು ನಾನು ಜನರೊಂದಿಗೆ ನಿಲ್ಲುತ್ತೇನೆ. ನಿಮ್ಮ ವಿರೋಧದ ನಡುವೆ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಸಾಧ್ಯವಿಲ್ಲ. ನಾನು ಈ ಭಾಗದ ಜನ ಹಾಗೂ ರೈತರೊಂದಿಗೆ ಇದ್ದೇನೆ ಎಂದು ಭರವಸೆ ನೀಡಿದ್ದಾರೆ.
Hosur Airport ವೈರಲ್ ವಿಡಿಯೋದಲ್ಲಿ ಏನಿದೆ
ವೈರಲ್ ಆಗಿರುವ ವಿಡಿಯೋದಲ್ಲಿ ನಾನು ಆಡಳಿತರೂಢ ಪಕ್ಷದ ಶಾಸಕನಾಗಿದ್ದೂ ನಾನು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ನಿಮ್ಮನ್ನು (ರೈತರನ್ನು) ಭೇಟಿ ಮಾಡಿಸಿದೆ. ದೊಡ್ಡ ಸಮಾವೇಶ ನಡೆಯುವ ಸಂದರ್ಭದಲ್ಲೇ ರೈತರು ಪ್ರತಿಭಟನೆ ಮಾಡಿದ್ದಾರೆ. ಇದು ಅವಶ್ಯಕತೆ ಇರಲಿಲ್ಲ. ಈ ಭಾಗದಲ್ಲಿ ಪರಿಹಾರ ಮಾಡಿಕೊಡಬೇಕು / ಭೂಸ್ವಾಧೀನ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಬದ್ಧತೆ ನನದು ಎಂದು ಅವರು ಹೇಳಿದ್ದಾರೆ.
ನಾವು ರೈತರ ಜಮೀನು ಒಂದೇ ಒಂದು ಭಾಗವನ್ನೂ ಸ್ವಾಧೀನ ಪಡಿಸಿಕೊಂಡಿಲ್ಲ. ಮುಂದೆಯೂ ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಹೊಸೂರು ಶಾಸಕ ವೈ ಪ್ರಕಾಶ್ ಅವರು ಕನ್ನಡದಲ್ಲೇ ಹೇಳಿದ್ದಾರೆ.
The beauty of belt in and around Bengaluru, in hosur, where a unqiue dialect of Telugu, & Kannada are spoken by locals, its a thing you won’t find elsewhere
Here is Hosur MLA (Tamil Nadu), explaining in fluent local telugu and kannada to farmers on airport and land issue pic.twitter.com/zDQR5AyK39
— Karthik Reddy (@bykarthikreddy) March 12, 2026
ಅಲ್ಲದೆ ಇದೇ ಸಂದರ್ಭದಲ್ಲಿ ಹೊಸೂರಿನ ಶಾಸಕ ವೈ. ಪ್ರಕಾಶ್ ಅವರು ಇದೇ ಸಂದರ್ಭದಲ್ಲಿ ತೆಲುಗು ಭಾಷೆಯಲ್ಲಿ ಮಾತನಾಡಿರುವುದು ಸಹ ಇದೆ. ಶಾಸಕ ಭಾಷಾ ಪ್ರೀತಿ ಹಾಗೂ ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
-

Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ – ಬೆಳ್ಳಿ ಬೆಲೆ
-

Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್
-

Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು
-

Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ – ಬಿಡಿಎ ಜಂಟಿ ಶಾಕ್
-

LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ
-

Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ
-

ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?
-

Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ
-

Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ
-

KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ
-

ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ
-

ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು
-

ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ
-

ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ
-

ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion
Disclaimer: This content was automatically imported from a third-party source via RSS feed. The original source is: https://kannada.oneindia.com/news/india/hosur-airport-row-2-979-acres-land-acquisition-near-bengaluru-mla-yprakash-speaks-in-kannada-video-446913.html. xn--babytilbehr-pgb.com does not claim ownership of this content. All rights remain with the original publisher.
