
Entertainment
oi-Manohara M
ಕಲರ್ಸ್ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಶ್ರೀಗಂಧದ ಗುಡಿ’ ಪ್ರೇಕ್ಷಕರಿಗೆ ಈಗ ಅನಿರೀಕ್ಷಿತ ಶಾಕ್ ಎದುರಾಗಿದೆ. ಧಾರಾವಾಹಿಯ ಪ್ರಮುಖ ಪಾತ್ರದಲ್ಲಿದ್ದ ಕಿರುತೆರೆ ನಟಿ ಸಂಜನಾ ಬುರ್ಲಿ ದಿಢೀರ್ ಸೀರಿಯಲ್ನಿಂದ ಹೊರನಡೆದಿದ್ದಾರೆ. ಈ ಬಗ್ಗೆ ವಾಹಿನಿಯ ಪ್ರೋಮೋದಲ್ಲೇ ಸಂಜನಾ ಬುರ್ಲಿ ಕ್ಲಾರಿಟಿ ಕೊಟ್ಟಿದ್ದಾರೆ. ಹೊಸ ಪಾತ್ರಧಾರಿ ಯಾರು ಎಂದು ಪರಿಚಯವೂ ಮಾಡಿಕೊಟ್ಟಿದ್ದಾರೆ. ಧಾರಾವಾಹಿಯ ಕೇಂದ್ರ ಬಿಂದುವಾಗಿದ್ದ ‘ಚಂದನಾ’ ಪಾತ್ರಧಾರಿ, ನಟಿ ಸಂಜನಾ ಬುರ್ಲಿ ಅವರು ಸೀರಿಯಲ್ನಿಂದ ದಿಢೀರ್ ಹೊರನಡೆದಿದ್ದಾರೆ.
ಸೀರಿಯಲ್ ಬಿಡಲು ಕಾರಣವೇನು?
ಸಂಜನಾ ಬುರ್ಲಿ ಅವರು ಪ್ರೋಮೋದಲ್ಲಿ ನೇರವಾಗಿ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ, “ನಾನು ಇವತ್ತು ಚಂದನಾ ಆಗಿ ಬಂದಿಲ್ಲ, ನಿಮ್ಮೆಲ್ಲರ ಸಂಜನಾ ಬುರ್ಲಿ ಆಗಿ ಬಂದಿದ್ದೀನಿ. ಒಂದು ಹುಡುಗಿಯ ಬದುಕಿನಲ್ಲಿ ಮದುವೆ ಎನ್ನುವುದು ಅತ್ಯಂತ ಮುಖ್ಯವಾದ ಘಟ್ಟ. ಈಗ ನಾನು ಕೂಡ ಅದೇ ನಿರ್ಣಾಯಕ ಹಂತದಲ್ಲಿದ್ದೇನೆ. ನಾನು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು. ಈ ಕಾರಣದಿಂದ ಇನ್ಮುಂದೆ ನಿಮ್ಮ ಮುಂದೆ ಚಂದನಾ ಆಗಿ ಬರಲು ಸಾಧ್ಯವಾಗುತ್ತಿಲ್ಲ” ಎಂದು ಭಾವನಾತ್ಮಕವಾಗಿ ವಿವರಿಸಿದ್ದಾರೆ.

ತಮ್ಮ ಪಾತ್ರಕ್ಕೆ ಪ್ರೇಕ್ಷಕರು ನೀಡಿದ ಪ್ರೀತಿ ಮತ್ತು ಅಕ್ಕರೆಯನ್ನು ತುಂಬಾ ಮಿಸ್ ಮಾಡಿಕೊಳ್ಳುವುದಾಗಿ ಹೇಳಿದ ಸಂಜನಾ, ಇದೊಂದು ಅನಿವಾರ್ಯ ಬದಲಾವಣೆ ಎಂದು ತಿಳಿಸಿದ್ದಾರೆ. ಅಲ್ಲದೆ, ತಮ್ಮ ಜಾಗಕ್ಕೆ ಹೊಸ ಚಂದನಾ ಆಗಿ ಬರಲಿರುವ ನಟಿ ಸ್ನೇಹಾ ಮಂಜುನಾಥ್ ಅವರನ್ನು ಪ್ರೇಕ್ಷಕರಿಗೆ ಪರಿಚಯಿಸಿಕೊಟ್ಟಿದ್ದಾರೆ. “ನನಗೆ ನೀಡಿದಷ್ಟೇ ಪ್ರೀತಿಯನ್ನು ಈ ಹೊಸ ಚಂದನಾಗೂ ನೀಡಿ” ಎಂದು ವಿನಂತಿಸುವ ಮೂಲಕ ಸಂಜನಾ ಬುರ್ಲಿ ಅವರು ಶ್ರೀಗಂಧದ ಗುಡಿ ತಂಡಕ್ಕೆ ಅಧಿಕೃತವಾಗಿ ವಿದಾಯ ಹೇಳಿದ್ದಾರೆ.
ಸ್ನೇಹಾ ಮಂಜುನಾಥ್ ಯಾರು?
ನಟಿ ಸಂಜನಾ ಅವರ ಜಾಗಕ್ಕೆ ಈಗ ಸ್ನೇಹಾ ಮಂಜುನಾಥ್ ಅವರ ಎಂಟ್ರಿಯಾಗಿದೆ. ಸಂಜನಾ ಅವರು ಅನಿವಾರ್ಯ ಕಾರಣಗಳಿಂದ ಧಾರಾವಾಹಿಯಿಂದ ಹೊರನಡೆದಿದ್ದು, ಆ ಜವಾಬ್ದಾರಿಯನ್ನು ಈಗ ಸ್ನೇಹಾ ವಹಿಸಿಕೊಂಡಿದ್ದಾರೆ. ಈ ಹೊಸ ಬದಲಾವಣೆಯು ಧಾರಾವಾಹಿಯ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದು, ಕಥೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ.

ನಟಿ ಸ್ನೇಹಾ ಮಂಜುನಾಥ್ ಅವರಿಗೆ ಕಿರುತೆರೆಯಲ್ಲಿ ಈಗಾಗಲೇ ದೊಡ್ಡ ಮಟ್ಟದ ಹೆಸರಿದೆ. ಈ ಹಿಂದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಶುಭಸ್ಯ ಶೀಘ್ರಂ’ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಅವರು ಮನೆಮಾತಾಗಿದ್ದರು. ಇದಕ್ಕೂ ಮುನ್ನ ಅವರು ‘ಶಾಂತಂ ಪಾಪಂ’ ನಂತಹ ಕ್ರೈಂ ಸರಣಿಗಳಲ್ಲಿ ಮತ್ತು ಜನಪ್ರಿಯ ‘ರಾಮಾಚಾರಿ’ ಧಾರಾವಾಹಿಯಲ್ಲೂ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
ಸ್ನೇಹಾ ಮಂಜುನಾಥ್ ಅವರ ಈ ಹೊಸ ಪಯಣವು ಈಗ ಜೀ ಕುಟುಂಬದಿಂದ ಕಲರ್ಸ್ ಕನ್ನಡ ವಾಹಿನಿಯತ್ತ ಸಾಗಿದೆ. ಇಷ್ಟು ದಿನ ಜೀ ಕನ್ನಡ ವಾಹಿನಿಯ ವಿವಿಧ ಪ್ರಾಜೆಕ್ಟ್ಗಳಲ್ಲಿ ತೊಡಗಿಸಿಕೊಂಡಿದ್ದ ಸ್ನೇಹಾ, ಈಗ ಅಧಿಕೃತವಾಗಿ ಕಲರ್ಸ್ ಕನ್ನಡ ಬಳಗವನ್ನು ಸೇರಿಕೊಂಡಿದ್ದಾರೆ. ಧಾರಾವಾಹಿಯ ತಂಡವು ಇವರ ಆಗಮನವನ್ನು ಸ್ವಾಗತಿಸಿದ್ದು, ಸ್ನೇಹಾ ಅವರ ಹೊಸ ಪಾತ್ರದ ಸಂಚಿಕೆಗಳು ಶೀಘ್ರದಲ್ಲೇ ಪ್ರಸಾರವಾಗಲಿವೆ.
-

ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ
-

Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್
-

Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ
-

ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion
-

ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ
-

Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು
-

ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ
-

ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ
-

Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ
-

Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ – ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು
-

Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ
-

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ
Disclaimer: This content was automatically imported from a third-party source via RSS feed. The original source is: https://kannada.oneindia.com/entertainment/sanjana-burli-quits-shri-gandhada-gudi-kannada-serial-actress-sneha-manjunath-replaces-her-447087.html. xn--babytilbehr-pgb.com does not claim ownership of this content. All rights remain with the original publisher.
