
India
oi-Shankrappa Parangi
India Rain Alert: ಕರ್ನಾಟಕ, ತಮಿಳುನಾಡು ಸೇರಿದಂತೆ ಭಾರತದಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಜೋರು ಮಳೆ ನಿರೀಕ್ಷೆ ಇದೆ. ಅಲ್ಲಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಪ್ರದೇಶಗಳಾದ ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕ ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಗಂಟೆಗೆ 70 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಮಾರ್ಚ್ 21ರವರೆಗೆ ಪಂಜಾಬ್, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದ ಹಲವೆಡೆ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ ಅಗಲಿದೆ ಎಂದು ಹವಾಮಾನ ತಜ್ಞರು ಎಚ್ಚರಿಸಿದ್ದಾರೆ.

ಈ ರಾಜ್ಯಗಳಲ್ಲೂ ಬಿರುಗಾಳಿ ಮಳೆ
ಪೂರ್ವ ಮತ್ತು ಮಧ್ಯ ಭಾರತದ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 22 ರವರೆಗೆ ವ್ಯಾಪಕ ಮಳೆ ಸಾಧ್ಯತೆ ಇದೆ. ವಿಶೇಷವಾಗಿ ಮಾರ್ಚ್ 20 ಮತ್ತು 21 ರಂದು ಭಾರಿ ವರುಣಾರ್ಭಟಕ ಕಂಡು ಬರಲಿದೆ. ಇಲ್ಲಿನ ಜಾರ್ಖಂಡ್ ಮತ್ತು ಗಂಗಾನದಿಯ ಪಶ್ಚಿಮ ಬಂಗಾಳದ ಭಾಗಗಳಲ್ಲಿ ಗಂಟೆಗೆ 80 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ಒಡಿಶಾದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಮಳೆ ಸಂಭವವಿದೆ.
ಇನ್ನೂ ದಕ್ಷಿಣ ಭಾರತದ ಕರ್ನಾಟಕ ಸೇರಿ ಕೇರಳದಲ್ಲಿ ಮುಂದಿನ ಮೂರು ದಿನ ಮಾರ್ಚ್ 22ರವರೆಗೆ ಬಿರುಗಾಳಿ ಸಹಿತ ಉತ್ತಮ ಮಳೆ ನಿರೀಕ್ಷೆ ಇದೆ. ಸಾಧಾರಣದಿಂದ ಜೋರು ಮಳೆಯು ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಹಾಗೂ ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸುರಿಯಲಿದೆ. ಈ ಮಳೆಗೂ ಮುನ್ನ ವ್ಯಾಪಕ ಸೆಕೆ, ಒಣಹವೆ ಮುಂದುವರಿಯಲಿದೆ.
ಮಳೆ ಜೊತೆಗೆ ಗರಿಷ್ಠ ತಾಪಮಾನ ದಾಖಲು
ಪಶ್ಚಿಮ ಹಾಗೂ ಈಶಾನ್ಯ ಭಾರತದ ಪ್ರಮುಖ ರಾಜ್ಯಗಳಾದ ಗುಜರಾತ್, ಮಹಾರಾಷ್ಟ್ರದಲ್ಲಿ ಇಂದು ಮಾರ್ಚ್ 19ರಿಂದ ಹಗುರ ಮಳೆ ಬರಲಿದೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ನಿರಂತರವಾಗಿ ಚದುರಿದಂತೆ ವರುಣನ ಅಬ್ಬರ ಕಂಡು ಬರಲಿದೆ. ಮಳೆ ನಿರೀಕ್ಷಿತ ಸಮಯದಲ್ಲಿ ಮೋಡಕವಿದ ವಾತಾವರಣ, ಬೇಸಿಗೆಯಲ್ಲೂ ಮಳೆಗಾಲದಂತೆ ಭಾಸವಾಗಲಿದೆ. ಆದರೆ ಹಗಲು ಎಂದಿನಂತೆ ಗರಿಷ್ಠ ತಾಪಮಾನ, ಉರಿಬಿಸಿಲು ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-

Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ
-

Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ
-

Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ
-

Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ
-

ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
-

Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?
-

ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ
-

ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್
-

Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ
-

ಮೊದಲ ಮಳೆಗೆ ಎಚ್ಚೆತ್ತ GBA: 2000 ಕೋಟಿ ರೂ. ವೆಚ್ಚದ ರಾಜಕಾಲುವೆ ಕಾಮಗಾರಿಗಳಿಗೆ ಡೆಡ್ಲೈನ್
-

Bengaluru Rain: ಬೆಂಗಳೂರಿನಲ್ಲಿ ತಾಪಮಾನ ಕುಸಿತ: ಸುಡುಬಿಸಿಲಿಗೆ ಬ್ರೇಕ್ ಹಾಕಿದ ವರ್ಷದ ಮೊದಲ ಮಳೆ, ತಂಪಾದ ಸಿಲಿಕಾನ್ ಸಿಟಿ
-

ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ
-

ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ ‘ಶಿವಾಲಿಕ್’ ಹಡಗು
-

Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ
-

Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ
Disclaimer: This content was automatically imported from a third-party source via RSS feed. The original source is: https://kannada.oneindia.com/news/india/india-weather-alert-next-3-days-heavy-rain-hailstorms-and-snowfall-alert-in-many-state-of-courntry-447641.html. xn--babytilbehr-pgb.com does not claim ownership of this content. All rights remain with the original publisher.
