
Karnataka
oi-Pragathi S
ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದ ನೇರ ಪರಿಣಾಮ ಇದೀಗ ಕರ್ನಾಟಕದ ಮೇಲೂ ಬೀರಲಾರಂಭಿಸಿದೆ. ರಾಜ್ಯದಲ್ಲಿ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಪೂರೈಕೆಯಲ್ಲಿ ಭಾರಿ ಕೊರತೆ ಉಂಟಾಗಿದ್ದು, ಹೋಟೆಲ್ ಉದ್ಯಮ ಸೇರಿದಂತೆ ಜನಸಾಮಾನ್ಯರು ಪರ್ಯಾಯ ವ್ಯವಸ್ಥೆಯ ಮೊರೆ ಹೋಗುತ್ತಿದ್ದಾರೆ. ಗ್ಯಾಸ್ ಸಿಲಿಂಡರ್ ಅಭಾವದಿಂದಾಗಿ ಹಳ್ಳಿಗಳು, ಅರೆ-ನಗರ ಪ್ರದೇಶಗಳು ಹಾಗೂ ವಾಣಿಜ್ಯ ಕೇಂದ್ರಗಳಲ್ಲಿ ಏಕಾಏಕಿ ಸೌದೆ (ಕಟ್ಟಿಗೆ) ಬೇಡಿಕೆ ತೀವ್ರವಾಗಿ ಹೆಚ್ಚಾಗಿದೆ. ಸೌದೆಯ ಈ ದಿಢೀರ್ ಬೇಡಿಕೆಯು ರಾಜ್ಯದ ಅರಣ್ಯ ಸಂಪತ್ತಿಗೆ ದೊಡ್ಡ ಕಂಟಕವಾಗಿ ಪರಿಣಮಿಸುವ ಸಾಧ್ಯತೆ ಇದ್ದು, ಅಕ್ರಮ ಮರ ಕಡಿತದ ಭೀತಿ ಎದುರಾಗಿದೆ.
ಈ ಗಂಭೀರ ಪರಿಸ್ಥಿತಿಯನ್ನು ಅರಿತಿರುವ ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಅರಣ್ಯ ಇಲಾಖೆಗೆ ಹೈ-ಅಲರ್ಟ್ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಡು, ಕಾಡಿನ ಅಂಚು ಹಾಗೂ ಸರ್ಕಾರಿ ಜಮೀನುಗಳಲ್ಲಿರುವ ಮರಗಳಿಗೆ ಕೊಡಲಿ ಏಟು ಬೀಳಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅಧಿಕಾರಿಗಳೇ ನೇರ ಹೊಣೆ
ಗ್ಯಾಸ್ ಸಿಗುತ್ತಿಲ್ಲ ಎಂಬ ನೆಪವೊಡ್ಡಿ, ಅರಣ್ಯ ಪ್ರದೇಶ ಅಥವಾ ಸರ್ಕಾರಿ ಭೂಮಿಯಲ್ಲಿ ಮರಗಳನ್ನು ಅಕ್ರಮವಾಗಿ ಕಡಿದರೆ, ಆಯಾ ವ್ಯಾಪ್ತಿಯ ಅರಣ್ಯ ವಲಯಾಧಿಕಾರಿಗಳು (ಆರ್ಎಫ್ಒ) ಮತ್ತು ಸಂಬಂಧಪಟ್ಟ ಸಿಬ್ಬಂದಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಿ, ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಕಠಿಣ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಹಾಗೂ ಅರಣ್ಯ ಪಡೆ ಮುಖ್ಯಸ್ಥರಿಗೆ ಅಧಿಕೃತ ಲಿಖಿತ ನಿರ್ದೇಶನವನ್ನೂ ರವಾನಿಸಲಾಗಿದೆ.
ಹೋಟೆಲ್, ರೆಸಾರ್ಟ್, ಹೋಂಸ್ಟೇ ಹಾಗೂ ಇತರೆ ವಾಣಿಜ್ಯ ಸಂಸ್ಥೆಗಳಿಗೆ ವಾಣಿಜ್ಯ ಸಿಲಿಂಡರ್ ಪೂರೈಕೆ ಸಂಪೂರ್ಣ ವ್ಯತ್ಯಯವಾಗಿರುವುದರಿಂದ ಅವರೆಲ್ಲರೂ ಲಾರಿಗಟ್ಟಲೆ ಸೌದೆ ಖರೀದಿಸುತ್ತಿರುವ ವರದಿಗಳಿವೆ. ಈ ಬೇಡಿಕೆಯನ್ನು ಪೂರೈಸಲು ಕೆಲ ಕಿಡಿಗೇಡಿಗಳು ರಾತ್ರೋರಾತ್ರಿ ಅರಣ್ಯ ಪ್ರದೇಶಗಳಲ್ಲಿ ಮರಗಳನ್ನು ಕಡಿಯುವ ಕುತಂತ್ರ ಮಾಡುವ ಸಾಧ್ಯತೆ ಇದೆ. ಇದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಅರಣ್ಯ ವಲಯಗಳಲ್ಲಿ ತಕ್ಷಣವೇ ಜಾರಿಗೆ ಬರುವಂತೆ ದಿನದ 24 ಗಂಟೆಯೂ ‘ಸೂಕ್ತ ಗಸ್ತು’ (Patrolling) ಹೆಚ್ಚಿಸುವಂತೆ ಆದೇಶಿಸಲಾಗಿದೆ.
ಗ್ಯಾಸ್ ಟ್ರಬಲ್ ಹಿನ್ನೆಲೆ – ಅಕ್ರಮ ಮರ ಕಡಿತ ತಡೆಯಲು ಕಟ್ಟೆಚ್ಚರ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದ ಉಂಟಾದ ಅನಿಲ ಅಭಾವದ ಪರಿಣಾಮವಾಗಿ ಸೌದೆಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ, ಕಾಡುಗಳು, ಕಾಡಿನಂಚು ಹಾಗೂ ಸರ್ಕಾರಿ ಭೂಮಿಗಳಲ್ಲಿ ಅಕ್ರಮ ಮರ ಕಡಿತವಾಗದಂತೆ ಕಟ್ಟೆಚ್ಚರ ವಹಿಸಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ.… pic.twitter.com/IIGG0sjhoJ
— Eshwar Khandre (@eshwar_khandre) March 12, 2026
ಅರಣ್ಯ ಇಲಾಖೆಯ ನಡುತೋಪುಗಳು, ಸರ್ಕಾರಿ ಜಮೀನುಗಳು ಹಾಗೂ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ರಸ್ತೆ ಬದಿಯಲ್ಲಿ ಬೆಳೆಸಿರುವ ಮರಗಳ ರಕ್ಷಣೆಗೆ ಇದೀಗ ಅರಣ್ಯ ಇಲಾಖೆ ಪ್ರಮುಖ ಆದ್ಯತೆ ನೀಡಬೇಕಿದೆ. ಅನುಮಾನಾಸ್ಪದ ಚಟುವಟಿಕೆಗಳು, ಅರಣ್ಯದಂಚಿನ ಗ್ರಾಮಗಳಲ್ಲಿನ ಸಾಗಾಟ ವಾಹನಗಳ ಮೇಲೆ ನಿರಂತರ ನಿಗಾ ಇರಿಸಲು ಸೂಚಿಸಲಾಗಿದೆ.
ಒಟ್ಟಾರೆಯಾಗಿ, ಜಾಗತಿಕ ವಿದ್ಯಮಾನಗಳಿಂದ ಸೃಷ್ಟಿಯಾಗಿರುವ ಈ ಅನಿಲ ಬಿಕ್ಕಟ್ಟು ತಾತ್ಕಾಲಿಕವಾಗಿದ್ದರೂ, ಸಾವಿರಾರು ವರ್ಷಗಳಿಂದ ಬೆಳೆದು ನಿಂತಿರುವ ಅರಣ್ಯ ಸಂಪತ್ತನ್ನು ಈ ನೆಪದಲ್ಲಿ ನಾಶ ಮಾಡಲು ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಸರ್ಕಾರ ರವಾನಿಸಿದೆ. ಸಾರ್ವಜನಿಕರೂ ಕೂಡ ಪರಿಸರ ಸಂರಕ್ಷಣೆಯ ಈ ಕಾರ್ಯದಲ್ಲಿ ಕೈಜೋಡಿಸಬೇಕಿದ್ದು, ಎಲ್ಲೆಂದರಲ್ಲಿ ಅಕ್ರಮವಾಗಿ ಮರ ಕಡಿಯುವುದು ಕಂಡುಬಂದರೆ ತಕ್ಷಣವೇ ಅರಣ್ಯ ಇಲಾಖೆಯ ಗಮನಕ್ಕೆ ತರಲು ಕೋರಲಾಗಿದೆ.
-

LPG Gas Crisis: ಯುದ್ಧ ಪರಿಣಾಮ: ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆ, ಹೋಟೆಲ್, ಪಿಜಿಗಳಲ್ಲಿ ಮೆನು ಚೇಂಜ್
-

LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್
-

LPG Crisis: ಭಾರತದ ಎಲ್ಪಿಜಿ ಬಿಕ್ಕಟ್ಟಿನ ಚರ್ಚೆಯ ಹಿಂದಿನ ವಾಸ್ತವ: ನೀತಿ ವೈಫಲ್ಯವಲ್ಲ, ಜಾಗತಿಕ ಇಂಧನ ಆಘಾತ
-

India LPG Supply: ಭಾರತಕ್ಕೆ ಎಲ್ಲಿಂದ ಹೇಗೆ ಬರುತ್ತೆ ಎಲ್ಪಿಜಿ? ಉತ್ಪಾದನೆಯಿಂದ ವಿತರಣೆಯವರೆಗೆ ಸರಪಳಿಯ ಸಂಪೂರ್ಣ ಮಾಹಿತಿ
-

ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ
-

ಗ್ಯಾಸ್ ಸಿಲಿಂಡರ್ ಇಲ್ಲದೆ ಮದುವೆಗೂ ಎದುರಾಯ್ತು ಸಮಸ್ಯೆ, ಗಂಡಿನ ಮನೆಯವರ ಒದ್ದಾಟ… LPG Shortage
-

Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ
-

Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್
-

Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ
-

ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ
-

Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ
-

Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು
-

ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು
-

Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ
-

ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/lpg-shortage-in-karnataka-forest-minister-warns-officials-against-illegal-tree-cutting-for-fuel-447023.html. xn--babytilbehr-pgb.com does not claim ownership of this content. All rights remain with the original publisher.
